ರಾಜ್ಯ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಬೇಕು.

ಸಾಮಾನ್ಯವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತುಕೊಳ್ಳುತ್ತಾರೆ. ಹೀಗೆ ಕುಳಿತುಕೊಂಡರೆ ಅಕ್ರಮ ಎಸಗುವ ವಿದ್ಯಾರ್ಥಿಗಳು ವಿಚಕ್ಷಣ ದಳ ಬಂದ ತಕ್ಷಣ ಎಚ್ಚೆತ್ತುಕೊಳ್ಳುತ್ತಾರೆ. ಹಾಗಾಗಿ ಮಂಡಳಿಯ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲು ತಿಳಿಸಿದೆ.

ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಅವಕಾಶ ಇರಬಾರದು. ಅಹಿತಕರ ಘಟನೆ ನಡೆಯದಂತೆ ಡಿಡಿಪಿಐ ಕ್ರಮ ವಹಿಸಬೇಕು.

ಸ್ವೀಕರಿಸಿದ ಪತ್ರಿಕೆಗಳನ್ನು ಅಲ್ಮೆರಾದಲ್ಲಿಟ್ಟುಕೊಳ್ಳಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಬಂಡಲ್ ಗಳು ಇರುವ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ಸೂಕ್ಷ್ಮ ಕೇಂದ್ರಗಳಿಗೆ ಬೇರೆ ಶಾಲೆ ಮುಖ್ಯ ಶಿಕ್ಷಕರನ್ನು ಮುಖ್ಯ ಅಧೀಕ್ಷಕರಾಗಿ ನೇಮಕ ಮಾಡಬೇಕು. ಎಸ್ಕಾರ್ಟ್ ನಲ್ಲಿ ಪ್ರಶ್ನೆ ಪತ್ರಿಕೆ ಸಾಗಿಸಬೇಕು ಎಂದು ಹೇಳಲಾಗಿದೆ.

andolanait

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

9 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

10 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

10 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

10 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

10 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

11 hours ago