ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಬೇಕು.
ಸಾಮಾನ್ಯವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತುಕೊಳ್ಳುತ್ತಾರೆ. ಹೀಗೆ ಕುಳಿತುಕೊಂಡರೆ ಅಕ್ರಮ ಎಸಗುವ ವಿದ್ಯಾರ್ಥಿಗಳು ವಿಚಕ್ಷಣ ದಳ ಬಂದ ತಕ್ಷಣ ಎಚ್ಚೆತ್ತುಕೊಳ್ಳುತ್ತಾರೆ. ಹಾಗಾಗಿ ಮಂಡಳಿಯ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲು ತಿಳಿಸಿದೆ.
ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಅವಕಾಶ ಇರಬಾರದು. ಅಹಿತಕರ ಘಟನೆ ನಡೆಯದಂತೆ ಡಿಡಿಪಿಐ ಕ್ರಮ ವಹಿಸಬೇಕು.
ಸ್ವೀಕರಿಸಿದ ಪತ್ರಿಕೆಗಳನ್ನು ಅಲ್ಮೆರಾದಲ್ಲಿಟ್ಟುಕೊಳ್ಳಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಬಂಡಲ್ ಗಳು ಇರುವ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ಸೂಕ್ಷ್ಮ ಕೇಂದ್ರಗಳಿಗೆ ಬೇರೆ ಶಾಲೆ ಮುಖ್ಯ ಶಿಕ್ಷಕರನ್ನು ಮುಖ್ಯ ಅಧೀಕ್ಷಕರಾಗಿ ನೇಮಕ ಮಾಡಬೇಕು. ಎಸ್ಕಾರ್ಟ್ ನಲ್ಲಿ ಪ್ರಶ್ನೆ ಪತ್ರಿಕೆ ಸಾಗಿಸಬೇಕು ಎಂದು ಹೇಳಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…