ರಾಜ್ಯ

ಕೇಂದ್ರ ಬಜೆಟ್‌ ಪೂರ್ವ ಸಭೆಯಲ್ಲಿ 11,495 ಕೋಟಿ ರೂ ವಿಶೇಷ ಅನುದಾನ ಕೇಳಿದ ಕರ್ನಾಟಕ

ಬೆಂಗಳೂರು: ಕೇಂದ್ರ ಬಜೆಟ್‌ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬೇಡಿಕೆ ಮತ್ತು ಸಲಹೆಗಳನ್ನು ಪಡೆಯಲು ಕಳೆದ ತಿಂಗಳು ಹಣಕಾಸು ಸಚಿವರ ಸಭೆ ನಡೆಸಿದ್ದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರರ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಅಭಿವೃದ್ದಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿತ್ತು. ಆಶಾ ಕರ್ಯಕರ್ತೆಯರಿಗೆ ಅವರ ಗೌರವಧನ ಕೇಂದ್ರದ ಪಾಲು ತಿಂಗಳಿಗೆ 5,000ರೂ. ಮತ್ತು ಅಂಗನವಾಡಿ ಸಹಾಯಕಿಯರ ಗೌರವಧನ 2000ರೂ.ಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕಚೇರಿಯಿಂದ ಮಾಹಿತಿ ಹಂಚಿಕೊಂಡ ಪ್ರಕಾರ, ನಗರದ ಮನೆಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಸಹಾಯಧನವನ್ನು 5ಲಕ್ಷ ರೂ.ಗಳಿಗೆ ಮತ್ತು ಗ್ರಾಮೀಣ ಮನೆಗಳಿಗೆ 3ಲಕ್ಷ ರೂ. ಗಳಿಗೆ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago