ಬೆಂಗಳೂರು: ಕಲಬುರ್ಗಿಯ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ನೀವು ಯಾವತ್ತಾದರೂ ಅನ್ಯಾಯಕ್ಕೆ ಒಳಗಾದವರ ಬೆನ್ನಿಗೆ ನಿಂತಿದ್ದೀರಾ ಹೇಳಿ?ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪಾಂಚಾಳ್ ಕುಟುಂಬದ ಬೆನ್ನಿಗೆ ನಿಂತುಕೊಳ್ಳುವುದು ಬಿಟ್ಟು, ಸಾವಿಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ಬೆನ್ನಿಗೆ ನಿಂತಿದ್ದೀರಿ ಎಂದರೆ, ನಿಮ್ಮ ಮನಸಾಕ್ಷಿ ಅದ್ಹೇಗೆ ಒಪ್ಪಿಕೊಂಡಿದೆ? ಎಂದು ವಾಗ್ದಾಳಿ ನಡೆಸಿದೆ.
ನೀವು ಯಾವಾಗಲೂ ದುಷ್ಟರ ಬೆನ್ನಿಗೆ ನಿಂತುಕೊಳ್ಳುತ್ತೀರಿ ಎನ್ನುವುದು ಮೊದಲಿನಿಂದಲೂ ಸಾಬೀತಾಗಿದೆ. ಅದಕ್ಕೆ ಸಾಕ್ಷಿಯಾಗಿ ಪಾಕ್ ಪರ ಘೋಷಣೆ ಕೂಗಿದವರ ಬೆನ್ನಿಗೆ ನಿಂತಿದ್ದೀರಿ, ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದವರ ಬೆನ್ನಿಗೆ ನಿಂತಿದ್ದೀರಿ, ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಹುಬ್ಬಳ್ಳಿ ಗಲಭೆಕೋರರ ಬೆನ್ನಿಗೆ ನಿಂತಿದ್ದೀರಿ, ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರರ ಪರವಾಗಿ ನಿಂತಿದ್ದೀರಿ, ಶಿವಮೊಗ್ಗದಲ್ಲಿ ಕಲ್ಲು ತೂರಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಬೆಳಗಾವಿ ಸುವರ್ಣಸೌಧದಲ್ಲಿ ಗೂಂಡಾಗಿರಿ ಮಾಡಿದವರ ಬೆನ್ನಿಗೆ ನಿಂತಿದ್ದೀರಿ ಹಾಗೂ ಇದೀಗ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಬೆನ್ನಿಗೆ ನಿಂತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…