ರಾಜ್ಯ

ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೇ ನೀವು ಯಾವತ್ತಾದರೂ ಅನ್ಯಾಯಕ್ಕೆ ಒಳಗಾದವರ ಬೆನ್ನಿಗೆ ನಿಂತಿದ್ದೀರಾ ಹೇಳಿ?ಆತ್ಮಹತ್ಯೆ ಮಾಡಿಕೊಂಡ ಸಚಿನ್‌ ಪಾಂಚಾಳ್‌ ಕುಟುಂಬದ ಬೆನ್ನಿಗೆ ನಿಂತುಕೊಳ್ಳುವುದು ಬಿಟ್ಟು, ಸಾವಿಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತಿದ್ದೀರಿ ಎಂದರೆ, ನಿಮ್ಮ ಮನಸಾಕ್ಷಿ ಅದ್ಹೇಗೆ ಒಪ್ಪಿಕೊಂಡಿದೆ? ಎಂದು ವಾಗ್ದಾಳಿ ನಡೆಸಿದೆ.

ನೀವು ಯಾವಾಗಲೂ ದುಷ್ಟರ ಬೆನ್ನಿಗೆ ನಿಂತುಕೊಳ್ಳುತ್ತೀರಿ ಎನ್ನುವುದು ಮೊದಲಿನಿಂದಲೂ ಸಾಬೀತಾಗಿದೆ. ಅದಕ್ಕೆ ಸಾಕ್ಷಿಯಾಗಿ ಪಾಕ್‌ ಪರ ಘೋಷಣೆ ಕೂಗಿದವರ ಬೆನ್ನಿಗೆ ನಿಂತಿದ್ದೀರಿ, ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದವರ ಬೆನ್ನಿಗೆ ನಿಂತಿದ್ದೀರಿ, ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಹುಬ್ಬಳ್ಳಿ ಗಲಭೆಕೋರರ ಬೆನ್ನಿಗೆ ನಿಂತಿದ್ದೀರಿ, ಕುಕ್ಕರ್‌ ಬಾಂಬ್‌ ಸ್ಫೋಟಿಸಿದ ಉಗ್ರರ ಪರವಾಗಿ ನಿಂತಿದ್ದೀರಿ, ಶಿವಮೊಗ್ಗದಲ್ಲಿ ಕಲ್ಲು ತೂರಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಬೆಳಗಾವಿ ಸುವರ್ಣಸೌಧದಲ್ಲಿ ಗೂಂಡಾಗಿರಿ ಮಾಡಿದವರ ಬೆನ್ನಿಗೆ ನಿಂತಿದ್ದೀರಿ ಹಾಗೂ ಇದೀಗ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಬೆನ್ನಿಗೆ ನಿಂತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

14 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

14 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago