ಬೆಂಗಳೂರು: ಕಲಬುರ್ಗಿಯ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ನೀವು ಯಾವತ್ತಾದರೂ ಅನ್ಯಾಯಕ್ಕೆ ಒಳಗಾದವರ ಬೆನ್ನಿಗೆ ನಿಂತಿದ್ದೀರಾ ಹೇಳಿ?ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪಾಂಚಾಳ್ ಕುಟುಂಬದ ಬೆನ್ನಿಗೆ ನಿಂತುಕೊಳ್ಳುವುದು ಬಿಟ್ಟು, ಸಾವಿಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ಬೆನ್ನಿಗೆ ನಿಂತಿದ್ದೀರಿ ಎಂದರೆ, ನಿಮ್ಮ ಮನಸಾಕ್ಷಿ ಅದ್ಹೇಗೆ ಒಪ್ಪಿಕೊಂಡಿದೆ? ಎಂದು ವಾಗ್ದಾಳಿ ನಡೆಸಿದೆ.
ನೀವು ಯಾವಾಗಲೂ ದುಷ್ಟರ ಬೆನ್ನಿಗೆ ನಿಂತುಕೊಳ್ಳುತ್ತೀರಿ ಎನ್ನುವುದು ಮೊದಲಿನಿಂದಲೂ ಸಾಬೀತಾಗಿದೆ. ಅದಕ್ಕೆ ಸಾಕ್ಷಿಯಾಗಿ ಪಾಕ್ ಪರ ಘೋಷಣೆ ಕೂಗಿದವರ ಬೆನ್ನಿಗೆ ನಿಂತಿದ್ದೀರಿ, ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದವರ ಬೆನ್ನಿಗೆ ನಿಂತಿದ್ದೀರಿ, ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಹುಬ್ಬಳ್ಳಿ ಗಲಭೆಕೋರರ ಬೆನ್ನಿಗೆ ನಿಂತಿದ್ದೀರಿ, ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರರ ಪರವಾಗಿ ನಿಂತಿದ್ದೀರಿ, ಶಿವಮೊಗ್ಗದಲ್ಲಿ ಕಲ್ಲು ತೂರಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಬೆಳಗಾವಿ ಸುವರ್ಣಸೌಧದಲ್ಲಿ ಗೂಂಡಾಗಿರಿ ಮಾಡಿದವರ ಬೆನ್ನಿಗೆ ನಿಂತಿದ್ದೀರಿ ಹಾಗೂ ಇದೀಗ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಬೆನ್ನಿಗೆ ನಿಂತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…