ರಾಜ್ಯ

ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೇ ನೀವು ಯಾವತ್ತಾದರೂ ಅನ್ಯಾಯಕ್ಕೆ ಒಳಗಾದವರ ಬೆನ್ನಿಗೆ ನಿಂತಿದ್ದೀರಾ ಹೇಳಿ?ಆತ್ಮಹತ್ಯೆ ಮಾಡಿಕೊಂಡ ಸಚಿನ್‌ ಪಾಂಚಾಳ್‌ ಕುಟುಂಬದ ಬೆನ್ನಿಗೆ ನಿಂತುಕೊಳ್ಳುವುದು ಬಿಟ್ಟು, ಸಾವಿಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತಿದ್ದೀರಿ ಎಂದರೆ, ನಿಮ್ಮ ಮನಸಾಕ್ಷಿ ಅದ್ಹೇಗೆ ಒಪ್ಪಿಕೊಂಡಿದೆ? ಎಂದು ವಾಗ್ದಾಳಿ ನಡೆಸಿದೆ.

ನೀವು ಯಾವಾಗಲೂ ದುಷ್ಟರ ಬೆನ್ನಿಗೆ ನಿಂತುಕೊಳ್ಳುತ್ತೀರಿ ಎನ್ನುವುದು ಮೊದಲಿನಿಂದಲೂ ಸಾಬೀತಾಗಿದೆ. ಅದಕ್ಕೆ ಸಾಕ್ಷಿಯಾಗಿ ಪಾಕ್‌ ಪರ ಘೋಷಣೆ ಕೂಗಿದವರ ಬೆನ್ನಿಗೆ ನಿಂತಿದ್ದೀರಿ, ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದವರ ಬೆನ್ನಿಗೆ ನಿಂತಿದ್ದೀರಿ, ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ಗಲಭೆ ಮಾಡಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಹುಬ್ಬಳ್ಳಿ ಗಲಭೆಕೋರರ ಬೆನ್ನಿಗೆ ನಿಂತಿದ್ದೀರಿ, ಕುಕ್ಕರ್‌ ಬಾಂಬ್‌ ಸ್ಫೋಟಿಸಿದ ಉಗ್ರರ ಪರವಾಗಿ ನಿಂತಿದ್ದೀರಿ, ಶಿವಮೊಗ್ಗದಲ್ಲಿ ಕಲ್ಲು ತೂರಿದ ಮತಾಂಧರ ಬೆನ್ನಿಗೆ ನಿಂತಿದ್ದೀರಿ, ಬೆಳಗಾವಿ ಸುವರ್ಣಸೌಧದಲ್ಲಿ ಗೂಂಡಾಗಿರಿ ಮಾಡಿದವರ ಬೆನ್ನಿಗೆ ನಿಂತಿದ್ದೀರಿ ಹಾಗೂ ಇದೀಗ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಬೆನ್ನಿಗೆ ನಿಂತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

19 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago