ರಾಜ್ಯ

ಕರ್ನಾಟಕ ಬಜೆಟ್‌| ಯಾವ್ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನ ಮೀಸಲು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) ಹಣಕಾಸು ಮಂತ್ರಿಯಾಗಿ 16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಪೈಕಿ ಯಾವ್ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನವನ್ನು ಮೀಸಲಿರಿಸಿದ್ದಾರೆ ಎಂಬುದನ್ನು ಈ ಕೆಳಕಂಡಂತೆ ನೋಡಬಹುದು.

ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಮೀಸಲು

1. ಶಿಕ್ಷಣ ಇಲಾಖೆ: 45, 286 ಕೋಟಿ ರೂಪಾಯಿ
2. ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ: 34,955 ಕೋಟಿ ರೂಪಾಯಿ
3. ಇಂಧನ ಇಲಾಖೆ: 26,896 ಕೋಟಿ ರೂಪಾಯಿ
4. ಗ್ರಾಮೀಣಾಭಿವೃದ್ಧಿ ಇಲಾಖೆ: 26,735 ಕೋಟಿ ರೂಪಾಯಿ
5. ನೀರಾವರಿ ಇಲಾಖೆ: 22,181 ಕೋಟಿ ರೂಪಾಯಿ
6. ನಗರಾಭಿವೃದ್ಧಿ, ವಸತಿ ಇಲಾಖೆ: 21,405 ಕೋಟಿ ರೂಪಾಯಿ
7. ಒಳ ಆಡಳಿತ ಮತ್ತು ಸಾರಿಗೆ ಇಲಾಖೆ: 20,625 ಕೋಟಿ ರೂಪಾಯಿ
8. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ: 17,473 ಕೋಟಿ ರೂಪಾಯಿ
9. ಕಂದಾಯ ಇಲಾಖೆ: 17,201 ಕೋಟಿ ರೂಪಾಯಿ
10. ಸಮಾಜ ಕಲ್ಯಾಣ ಇಲಾಖೆ: 16,955 ಕೋಟಿ ರೂಪಾಯಿ
11. ಲೋಕೋಪಯೋಗಿ ಇಲಾಖೆ: 11,841 ಕೋಟಿ ರೂಪಾಯಿ
12. ಆಹಾರ ಇಲಾಖೆ: 8,275 ಕೋಟಿ ರೂಪಾಯಿ
13. ಕೃಷಿ, ತೋಟಗಾರಿಕೆ ಇಲಾಖೆ: 7,145 ಕೋಟಿ ರೂಪಾಯಿ
14. ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ: 3,977 ಕೋಟಿ ರೂಪಾಯಿ
15. ಇತರೆ: 1,49,857 ಕೋಟಿ ರೂಪಾಯಿಗಳಷ್ಟು ಅನುದಾನವನ್ನು ನೀಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

44 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

58 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago