ಫೆಬ್ರವರಿ 12ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16ರಂದು ಬಜೆಟ್ ಮಂಡನೆಯಾಗಲಿದೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನ ( ಫೆಬ್ರವರಿ 12 ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರಲಿದ್ದು ಮಾರ್ಚ್ ತಿಂಗಳಿನಿಂದಲೇ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿಯೇ ಬಜೆಟ್ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ಇನ್ನು ಮುಂಬರುವ ಲೋಕಸಭೆ ಚುನಾವಣೆಯನ್ನು ತಲೆಯಲ್ಲಿಟ್ಟುಕೊಂಡು ಸಿದ್ದರಾಮಯ್ಯ ಏನೆಲ್ಲಾ ಯೋಜನೆಗಳನ್ನು ಈ ಬಜೆಟ್ನಲ್ಲಿ ಘೋಷಿಸಬಹುದು ಎಂಬ ಕುತೂಹಲ ಉಂಟಾಗಿದೆ. ಮತ್ತೊಂದೆಡೆ ಸರ್ಕಾರದಲ್ಲಿ ಈಗಾಗಲೇ ಅನುದಾನದ ಕೊರತೆ ಉಂಟಾಗಿದ್ದು ಹೊಸ ಹೊಸ ಘೋಷಣೆಯನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ ಎಂದೇ ಹೇಳಬಹುದು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…