ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಕೇವಲ ಟಿಕ್ ಟಾಕ್, ಶೇರ್ ಚಾಟ್ ನಂತಹ 59 ಚೀನಿ ಆಪ್ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
2013 – 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು. ಆದರೆ 2023 – 24 ರ ಮೋದಿ ಸರ್ಕಾರದಲ್ಲಿ $101.7 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿವೆ. ಕೇವಲ 10 ವರ್ಷಗಳಲ್ಲಿ ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೌಲ್ಯ 100% ಅಧಿಕವಾಗಿದೆ ಎಂದು ಆರೋಪಿಸಿದೆ.
ಚೀನಾದಿಂದ ಆಮದಾಗುತ್ತಿರುವ ಸರಕುಗಳಿಂದ ಚನ್ನಪಟ್ಟಣದ ಬೊಂಬೆ ತಯಾರಿಸುವಂತಹ ಗುಡಿ ಕೈಗಾರಿಕೆಗಳು, ಸ್ವದೇಶಿ ಉತ್ಪಾದನಾ ವಲಯಕ್ಕೆ ಹೊಡೆತ ಬಿದ್ದಿದ್ದಲ್ಲದೇ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಗಳು ಹಾಗೂ ಅನೇಕ ಕಾರ್ಖಾನೆಗಳಿಗೆ ಬೀಗ ಬೀಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…
ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…
ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…
ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್ಭೇಟಿ ನೀಡಿ, ವಿವಿಧ…
ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…
ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…