ರಾಜ್ಯ

ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಕಿಡಿ

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, ಕೇವಲ ಟಿಕ್ ಟಾಕ್, ಶೇರ್ ಚಾಟ್ ನಂತಹ 59 ಚೀನಿ ಆಪ್‌ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

2013 – 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು. ಆದರೆ 2023 – 24 ರ ಮೋದಿ ಸರ್ಕಾರದಲ್ಲಿ $101.7 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿವೆ. ಕೇವಲ 10 ವರ್ಷಗಳಲ್ಲಿ ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೌಲ್ಯ 100% ಅಧಿಕವಾಗಿದೆ ಎಂದು ಆರೋಪಿಸಿದೆ.

ಚೀನಾದಿಂದ ಆಮದಾಗುತ್ತಿರುವ ಸರಕುಗಳಿಂದ ಚನ್ನಪಟ್ಟಣದ ಬೊಂಬೆ ತಯಾರಿಸುವಂತಹ ಗುಡಿ ಕೈಗಾರಿಕೆಗಳು, ಸ್ವದೇಶಿ ಉತ್ಪಾದನಾ ವಲಯಕ್ಕೆ ಹೊಡೆತ ಬಿದ್ದಿದ್ದಲ್ಲದೇ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಗಳು ಹಾಗೂ ಅನೇಕ ಕಾರ್ಖಾನೆಗಳಿಗೆ ಬೀಗ ಬೀಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

50 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago