ರಾಜ್ಯ

ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಕಿಡಿ

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, ಕೇವಲ ಟಿಕ್ ಟಾಕ್, ಶೇರ್ ಚಾಟ್ ನಂತಹ 59 ಚೀನಿ ಆಪ್‌ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

2013 – 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು. ಆದರೆ 2023 – 24 ರ ಮೋದಿ ಸರ್ಕಾರದಲ್ಲಿ $101.7 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿವೆ. ಕೇವಲ 10 ವರ್ಷಗಳಲ್ಲಿ ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೌಲ್ಯ 100% ಅಧಿಕವಾಗಿದೆ ಎಂದು ಆರೋಪಿಸಿದೆ.

ಚೀನಾದಿಂದ ಆಮದಾಗುತ್ತಿರುವ ಸರಕುಗಳಿಂದ ಚನ್ನಪಟ್ಟಣದ ಬೊಂಬೆ ತಯಾರಿಸುವಂತಹ ಗುಡಿ ಕೈಗಾರಿಕೆಗಳು, ಸ್ವದೇಶಿ ಉತ್ಪಾದನಾ ವಲಯಕ್ಕೆ ಹೊಡೆತ ಬಿದ್ದಿದ್ದಲ್ಲದೇ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಗಳು ಹಾಗೂ ಅನೇಕ ಕಾರ್ಖಾನೆಗಳಿಗೆ ಬೀಗ ಬೀಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

10 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

19 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

19 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

19 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

19 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

19 hours ago