ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಮೇರೆಗೂ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ ಎಂದು, ಪರಿಹಾರ ನೀಡುವಲ್ಲಿ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಕೂತು ಕಾಂಗ್ರೆಸ್ ಪಕ್ಷದ ನಾಯಕರು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಇವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸಾಥ್ ನೀಡಿದರು.
ಖಾಲಿ ಚೊಂಬು ಹಿಡಿದು, ಬಿಜೆಪಿ ವಿರುದ್ಧದ ಪೋಸ್ಟರ್ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಇನ್ನು ಈ ಪೋಸ್ಟರ್ನಲ್ಲಿ ಬರ ಪರಿಹಾರಕ್ಕೆ ನಾವು ಕೇಳಿದ್ದು, 18,174 ಸಾವಿರ ಕೋಟಿ ರೂ. ಆದರೆ ನಮಗೆ ಸಿಕ್ಕಿದ್ದು 3,454 ಸಾವಿರ ಕೋಟಿ ರೂ. ಆಗಿದೆ. ಸುಪ್ರೀಂ ಕೊರ್ಟ್ನಿಂದ ಆದೇಶ ಬಂದಿದ್ದರು ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಸಚಿವರಾದ ಡಾ. ಜಿ ಪರಮೇಶ್ವರ್, ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ, ದಿನೇಶ್ ಗೂಂಡೂರಾವ್, ಚೆಲುವರಾಯಸ್ವಾಮಿ ಜತೆಯಲ್ಲಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…