ರಾಜ್ಯ

ಕರ್ನಾಟಕದಲ್ಲಿ ಕ್ಯಾಸಿನೋಗೆ ಅವಕಾಶವಿಲ್ಲ: ಸಚಿವ ಎಚ್.ಕೆ.ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಹಾಗೂ ಸಾರ್ವಜನಿಕರು ಮತ್ತು ಖಾಸಗಿ ಪಾಲುದಾರಿಕೆ ಅಗತ್ಯ. ಈ ನಿಟ್ಟಿನಲ್ಲಿ ಯಾರು ಬೇಕಾದರೂ ಉತ್ತಮ ಸಲಹೆ, ಅಭಿಪ್ರಾಯಗಳನ್ನು ನೀಡಬಹುದು. ಆದರೆ, ಕ್ಯಾಸಿನೋದಂತಹ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಸಲಹೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಆದಾಯ ಹೆಚ್ಚಿಸುವ ಉದ್ದೇಶದಿಂದ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವಂತೆ ಹಲವರು ಸಲಹೆ ನೀಡಿದ್ದಾರೆ. ಹಾಗೆಂದ ಮಾತ್ರಕ್ಕೆ ಕ್ಯಾಸಿನೋ ನಡೆಸುವುದಕ್ಕೆ ಅನುಮತಿ ನೀಡಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ. ಅಂತಹಾ ಸಲಹೆಗಳನ್ನು ಸರ್ಕಾರ ಯಾವುದೇ ಮುಲಾಜಿಲ್ಲದೇ ತಿರಸ್ಕರಿಸಲಿದೆ ಎಂದರು.

ಪರಿಷ್ಕೃತ ಪ್ರವಾಸೋದ್ಯಮ ನೀತಿಯು ರಾಜ್ಯವನ್ನು ಉನ್ನತ ಶ್ರೇಣಿಯ ಪ್ರವಾಸೋದ್ಯಮವನ್ನಾಗಿಸುವ ವಿಶ್ವಾಸವಿದೆ. ಈ ದಿಸೆಯಲ್ಲಿ ಹೂಡಿಕೆ, ಮೂಲಸೌಕರ್ಯ, ಪರಂಪರೆ, ತಂತ್ರಜ್ಞಾನವನ್ನು ಹೆಚ್ಚು ಬಳಕೆ ಮಾಡಲು ಗಮನ ಹರಿಸಲಾಗುತ್ತಿದೆ. ಇದಕ್ಕೆ ಇಲಾಖೆ, ಸಾರ್ವಜನಿಕ ಮತು ಖಾಸಗಿ ಪಾಲುದಾರಿಕೆ ಒಟ್ಟಾಗಿ ಹೆಜ್ಜೆ ಇಡುವ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ ನಾವು ಕೇವಲ ರಾಜಕಾರಣಿಗಳು, ಅಧಿಕಾರಿಗಳ ಸಭೆ ನಡೆಸಿ ನೀತಿ ರೂಪಿಸುತ್ತಿಲ್ಲ. ಸಾರಿಗೆ ಸಂಸ್ಥೆಗಳು, ಹೋಟೆಲ್‌, ರೆಸ್ಟೋರೆಂಟ್‌ ಮಾಲೀಕರು, ವ್ಯಾಪಾರಿಗಳ ಸಂಘಟನೆಗಳು, ತಜ್ಞರು, ಪ್ರವಾಸಿ ತಾಣಗಳ ಸಾರ್ವಜನಿಕ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲಾ ಪಾಲುದಾರರನ್ನು ಒಳಗೊಂಡು ಅವರ ಸಲಹೆ ಅಭಿಪ್ರಾಯಗಳನ್ನು ಸಂಗ್ರಹಿಸಬೇಕು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

5 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

23 hours ago