ರಾಜ್ಯ

ಇನ್ನುಮುಂದೆ ಮನಸೋ ಇಚ್ಚೆ ದರ ಏರಿಸುವ ಹಾಗಿಲ್ಲ; ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ!

ಓಲಾ, ಊಬರ್‌ ಹಾಗೂ ರಾಪಿಡೋ ಸೇರಿದಂತೆ ಇನ್ನೂ ಕೆಲ ಟ್ಯಾಕ್ಸಿ ಬುಕಿಂಗ್‌ ಅಪ್ಲಿಕೇಶನ್‌ಗಳು ಮನಸೋ ಇಚ್ಚೆ ದರ ನಿಗದಿ ಮಾಡುತ್ತಿವೆ. ರಾತ್ರಿ ಹತ್ತು ದಾಟಿದರೆ ಸಾಕು ದರವನ್ನು ಬೇಕಾಬಿಟ್ಟಿ ಏರಿಸಿಬಿಡುತ್ತಾರೆ, ಇನ್ನು ಮಳೆ ಬಂತೆಂದರೆ ಕೇಳುವ ಹಾಗೆ ಇಲ್ಲ ಒಂದೊಂದು ನಗರಗಳಲ್ಲಿ ಡಬಲ್‌ ರೇಟ್‌ ಫಿಕ್ಸ್‌ ಎಂದು ಪ್ರಯಾಣಿಕರು ಕಿಡಿಕಾರುತ್ತಲೇ ಇದ್ದರು.

ಹೀಗೆ ಖಾಸಗಿ ಟ್ಯಾಕ್ಸಿ ಬುಕಿಂಗ್‌ ಕಂಪನಿಗಳು ನಡೆಸುತ್ತಿದ್ದ ಆಟಟೋಪಕ್ಕೆ ಬ್ರೇಕ್‌ ಹಾಕಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ರಾಜ್ಯಾದ್ಯಂತ ಏಕರೂಪದ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ ತಿಂಗಳಿನಿಂದಲೇ ಈ ಹೊಸ ನಿಯಮ ಅನ್ವಯಿಸಲಿದೆ.

ಏಕರೂಪ ದರದ ಮಾನದಂಡಗಳು
* ಹತ್ತು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 100 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 24 ರೂಪಾಯಿ ನಿಗದಿ.
* 10ರಿಂದ 15 ಲಕ್ಷ ರೂಪಾಯಿಗಳ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 115 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 28 ರೂಪಾಯಿ ನಿಗದಿ.
* 15 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 130 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 32 ರೂಪಾಯಿ ನಿಗದಿ.

ಹೊಸ ನಿಯಮಗಳು:
* ವೈಯಕ್ತಿಕ ಲಗೇಜುಗಳಿಗೆ 120 ಕೆಜಿಗಳವರೆಗೆ ವಿನಾಯಿತಿ
* ಮೊದಲ 5 ನಿಮಿಷಗಳ ಕಾಯುವಿಕೆಗೆ ಶುಲ್ಕ ಇಲ್ಲ
* ಪ್ರಯಾಣಿಕರಿಂದ ಜಿಎಸ್‌ಟಿ, ಟೋಲ್‌ ವಸೂಲಿಗೆ ಅವಕಾಶ
* ಬೆಳಗಿನ ಜಾವ 6 ಗಂಟೆವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ

andolana

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

11 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

11 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

11 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

11 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

11 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

12 hours ago