ರಾಜ್ಯ

ಇನ್ನುಮುಂದೆ ಮನಸೋ ಇಚ್ಚೆ ದರ ಏರಿಸುವ ಹಾಗಿಲ್ಲ; ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ!

ಓಲಾ, ಊಬರ್‌ ಹಾಗೂ ರಾಪಿಡೋ ಸೇರಿದಂತೆ ಇನ್ನೂ ಕೆಲ ಟ್ಯಾಕ್ಸಿ ಬುಕಿಂಗ್‌ ಅಪ್ಲಿಕೇಶನ್‌ಗಳು ಮನಸೋ ಇಚ್ಚೆ ದರ ನಿಗದಿ ಮಾಡುತ್ತಿವೆ. ರಾತ್ರಿ ಹತ್ತು ದಾಟಿದರೆ ಸಾಕು ದರವನ್ನು ಬೇಕಾಬಿಟ್ಟಿ ಏರಿಸಿಬಿಡುತ್ತಾರೆ, ಇನ್ನು ಮಳೆ ಬಂತೆಂದರೆ ಕೇಳುವ ಹಾಗೆ ಇಲ್ಲ ಒಂದೊಂದು ನಗರಗಳಲ್ಲಿ ಡಬಲ್‌ ರೇಟ್‌ ಫಿಕ್ಸ್‌ ಎಂದು ಪ್ರಯಾಣಿಕರು ಕಿಡಿಕಾರುತ್ತಲೇ ಇದ್ದರು.

ಹೀಗೆ ಖಾಸಗಿ ಟ್ಯಾಕ್ಸಿ ಬುಕಿಂಗ್‌ ಕಂಪನಿಗಳು ನಡೆಸುತ್ತಿದ್ದ ಆಟಟೋಪಕ್ಕೆ ಬ್ರೇಕ್‌ ಹಾಕಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ರಾಜ್ಯಾದ್ಯಂತ ಏಕರೂಪದ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ ತಿಂಗಳಿನಿಂದಲೇ ಈ ಹೊಸ ನಿಯಮ ಅನ್ವಯಿಸಲಿದೆ.

ಏಕರೂಪ ದರದ ಮಾನದಂಡಗಳು
* ಹತ್ತು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 100 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 24 ರೂಪಾಯಿ ನಿಗದಿ.
* 10ರಿಂದ 15 ಲಕ್ಷ ರೂಪಾಯಿಗಳ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 115 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 28 ರೂಪಾಯಿ ನಿಗದಿ.
* 15 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಲೊಮೀಟರ್‌ವರೆಗೆ ಕನಿಷ್ಟ 130 ರೂ ನಿಗದಿ. 4 ಕಿಲೊಮೀಟರ್‌ ಬಳಿಕ ಪ್ರತಿ ಕಿ.ಮೀ.ಗೆ ಹೆಚ್ಚುವರಿ 32 ರೂಪಾಯಿ ನಿಗದಿ.

ಹೊಸ ನಿಯಮಗಳು:
* ವೈಯಕ್ತಿಕ ಲಗೇಜುಗಳಿಗೆ 120 ಕೆಜಿಗಳವರೆಗೆ ವಿನಾಯಿತಿ
* ಮೊದಲ 5 ನಿಮಿಷಗಳ ಕಾಯುವಿಕೆಗೆ ಶುಲ್ಕ ಇಲ್ಲ
* ಪ್ರಯಾಣಿಕರಿಂದ ಜಿಎಸ್‌ಟಿ, ಟೋಲ್‌ ವಸೂಲಿಗೆ ಅವಕಾಶ
* ಬೆಳಗಿನ ಜಾವ 6 ಗಂಟೆವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago