ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ.
ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ವಕ್ಫ್ ಮಂಡಳಿಯ ಹಣ ಅಕ್ರಮವಾಗಿ ವರ್ಗಾವಣೆಯಾದ ಆರೋಪ ಕೇಳಿಬಂದಿದ್ದು, ಮಾಜಿ ಸಿಇಓ ಝಲ್ಫಿಕಾರುಲ್ಲಾ ವಿರುದ್ಧ ವಕ್ಫ್ ಮಂಡಳಿ ದೂರು ನೀಡಿದೆ. ಮಂಡಳಿ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮ್ಮದ್ ಅಬ್ಬಾಸ್ ಹೈಗ್ರೌಂಡ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಈ ಹಣವನ್ನು ಝಲ್ಫಿಕಾರುಲ್ಲಾ 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್ಗೆ ಸಿಇಓ ಹೆಸರಿನಲ್ಲಿ ಎರಡು ಚೆಕ್ಗಳ ಮೂಲಕ ವರ್ಗಾವಣೆ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ ನಷ್ಟವಾಗಿದೆ. ಝಲ್ಫಿಕಾರುಲ್ಲಾ ಅವರು ಮಂಡಳಿಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ವಕ್ಫ್ ಮಂಡಳಿ ದೂರು ದಾಖಲಿಸಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…