wing commander case karnataka
ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ ಒಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ವಿಂಗ್ ಕಮಾಂಡ್ ಶೀಲಾದಿತ್ಯ ಬೋಸ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿರುವುದರಿಂದ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:- ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್ ಆಗ್ರಹ
ಇನ್ನು ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದೆ. ಕೊಲೆ ನಾನೇ ಮಾಡಿದ್ದು ಎಂದು ಓಂಪ್ರಕಾಶ್ರವರ ಪತ್ನಿ ಒಪ್ಪಿಕೊಂಡಿದ್ದಾರೆ. ಕೊಲೆಯ ಉದ್ದೇಶ ಸೇರಿದಂತೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿಗೆ ವಹಿಸಲಾಗಿದೆ. ಓಂಪ್ರಕಾಶ್ರವರು ಹಿರಿಯ ಅಧಿಕಾರಿಯಾಗಿದ್ದರು. ಇದೊಂದು ಸೂಕ್ಷ್ಮ ಪ್ರಕರಣ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆ ನಡೆಸುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:- ಓದುಗರ ಪತ್ರ: ಓಂ ಪ್ರಕಾಶ್ ಹತ್ಯೆ ಹಿಂದಿನ ನಿಜ ಕಾರಣ ಬಯಲಾಗಬೇಕು
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…