ರಾಜ್ಯ

ವಿಂಗ್‌ ಕಮಾಂಡರ್‌ ಶೀಲಾದಿತ್ಯ ಬೋಸ್ ಬಂಧನಕ್ಕೆ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ ಒಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ವಿಂಗ್ ಕಮಾಂಡ್ ಶೀಲಾದಿತ್ಯ ಬೋಸ್ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿರುವುದರಿಂದ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ:- ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್‌ ಆಗ್ರಹ

ಇನ್ನು ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದೆ. ಕೊಲೆ ನಾನೇ ಮಾಡಿದ್ದು ಎಂದು ಓಂಪ್ರಕಾಶ್‍ರವರ ಪತ್ನಿ ಒಪ್ಪಿಕೊಂಡಿದ್ದಾರೆ. ಕೊಲೆಯ ಉದ್ದೇಶ ಸೇರಿದಂತೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿಗೆ ವಹಿಸಲಾಗಿದೆ. ಓಂಪ್ರಕಾಶ್‍ರವರು ಹಿರಿಯ ಅಧಿಕಾರಿಯಾಗಿದ್ದರು. ಇದೊಂದು ಸೂಕ್ಷ್ಮ ಪ್ರಕರಣ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆ ನಡೆಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:- ಓದುಗರ ಪತ್ರ: ಓಂ ಪ್ರಕಾಶ್ ಹತ್ಯೆ ಹಿಂದಿನ ನಿಜ ಕಾರಣ ಬಯಲಾಗಬೇಕು 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago