wing commander case karnataka
ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ ಒಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ವಿಂಗ್ ಕಮಾಂಡ್ ಶೀಲಾದಿತ್ಯ ಬೋಸ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿರುವುದರಿಂದ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:- ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್ ಆಗ್ರಹ
ಇನ್ನು ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿದೆ. ಕೊಲೆ ನಾನೇ ಮಾಡಿದ್ದು ಎಂದು ಓಂಪ್ರಕಾಶ್ರವರ ಪತ್ನಿ ಒಪ್ಪಿಕೊಂಡಿದ್ದಾರೆ. ಕೊಲೆಯ ಉದ್ದೇಶ ಸೇರಿದಂತೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿಗೆ ವಹಿಸಲಾಗಿದೆ. ಓಂಪ್ರಕಾಶ್ರವರು ಹಿರಿಯ ಅಧಿಕಾರಿಯಾಗಿದ್ದರು. ಇದೊಂದು ಸೂಕ್ಷ್ಮ ಪ್ರಕರಣ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆ ನಡೆಸುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:- ಓದುಗರ ಪತ್ರ: ಓಂ ಪ್ರಕಾಶ್ ಹತ್ಯೆ ಹಿಂದಿನ ನಿಜ ಕಾರಣ ಬಯಲಾಗಬೇಕು
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…