ರಾಜ್ಯ

ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆ

ಇನ್ಫೋಸಿಸ್ ಪಾಲುದಾರಿಕೆಯೊಂದಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ*

ಬೆಂಗಳೂರು : ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಇಲಾಖೆಯು ಎಲ್ಲಾ ಪ್ರಮುಖ ಅಧಿಕಾರಿಗಳಿಗೆ, ಮುಖ್ಯಸ್ಥರಿಗೆ, ಜಿಲ್ಲಾ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ ಸ್ಕಿಲ್ಲಿಂಗ್‌) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ತಳಮಟ್ಟದಿಂದ ಅನುಷ್ಠಾನಕ್ಕೆ ತರಲು ಈ ತರಬೇತಿ ಕಾರ್ಯಕ್ರಮವು ಪರಿಣಾಮಕಾರಿಯಾಗಲಿದೆ.

ಇನ್ಫೋಸಿಸ್ ಸಂಸ್ಥೆಯೊಂದಿಗೆ ಈ ಸಂಬಂಧ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ. ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ಪ್ರಾರಂಭವಾದ ಎರಡು ದಿನಗಳ ಕಾರ್ಯಾಗಾರವು ರಾಜ್ಯದಲ್ಲೇ ಮೊದಲನೆಯದ್ದಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಗುರುವಾರ ವಿಕಾಸಸೌಧದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಾಗಾರವು ಜಿಲ್ಲಾಮಟ್ಟದ ಅಧಿಕಾರಿಗಳ ನಾಯಕತ್ವ, ಕೌಶಲ್ಯ ವ್ಯವಸ್ಥೆ, ಸಮರ್ಥ ಆಡಳಿತ ಮತ್ತು ಯೋಜನೆ ಅನುಷ್ಠಾನಕ್ಕೆ ಬೇಕಾಗಿರುವ ಎಲ್ಲ ಸಾಂಸ್ಥಿಕ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ನಾವು ಕಲಿಕೆ ಮತ್ತು ಸಮಸ್ಯೆ ಪರಿಹಾರಕ್ಕಾಗಿ ಸಹಯೋಗದ ವಾತಾವರಣವನ್ನು ಸೃಷ್ಟಿಸುತ್ತಿದ್ದೇವೆ. ಅದು ತಳಮಟ್ಟದಿಂದ ಸುಧಾರಣೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಡಾ. ಪಾಟೀಲ್‌ ತಿಳಿಸಿದರು.

ಈ ಕಾರ್ಯಕ್ರಮವು ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ: ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳ ಸೂತ್ರ (DSDPs), ಕೇಂದ್ರ ಯೋಜನೆಗಳೊಂದಿಗೆ ಪರಿಣಾಮಕಾರಿ ಸಮ್ಮಿಲನ ಮತ್ತು ಮುಖ್ಯಮಂತ್ರಿ ಕಲಿಕಾ ಕೌಶಲ್ಯ ಯೋಜನೆ (CMKKY) ಅನುಷ್ಠಾನದ ವಿಮರ್ಶೆ. ಅಧಿಕಾರಿಗಳು CMKKY 2.0 ಅನ್ನು ವಿನ್ಯಾಸಗೊಳಿಸುವ ಮತ್ತು ಜಾರಿಗೊಳಿಸುವ ಕುರಿತು ರಚನಾತ್ಮಕ ಚರ್ಚೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ಫೋಸಿಸ್ ತಜ್ಞರಾದ ಸಂತೋಷ್ ಅನಂತಪುರ, ಡಾ. ಮೀನಾಕ್ಷಿ, ಗಿರಿಜಾ ಮತ್ತು ವಿನಯ್ ವಸಂತ್ ಅವರು ನಾಯಕತ್ವ ಅಭಿವೃದ್ಧಿ, ಕೌಶಲ್ಯ ತರಬೇತಿ ಮತ್ತು ಜಿಲ್ಲಾ ಅಧಿಕಾರಿಗಳ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ನಿಭಾಯಿಸುವ ಕುರಿತು ತರಬೇತಿ ನೀಡಲಿದ್ದಾರೆ.

ಪರಿಹಾರಗಳನ್ನು ಗುರುತಿಸುವುದರ ಜೊತೆಗೆ ಜಿಲ್ಲಾಮಟ್ಟದಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಅನುಷ್ಠಾನದ ಸವಾಲುಗಳ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಹೆಚ್ಚಿನ ವಿಷಯ ತಿಳಿದುಕೊಳ್ಳುವ ನಿರೀಕ್ಷೆ ಇದೆ ಎಂದು ಕೆಎಸ್‌ಡಿಸಿ ಅಧ್ಯಕ್ಷರಾದ ಕಾಂತ ನಾಯಕ್ ಹೇಳಿದರು.

ಮಾಜಿ ಅಧಿಕಾರಿ ಮತ್ತು ಕೆಎಸ್‌ಡಿಎ ಅಧ್ಯಕ್ಷರಾದ ವಿ. ರಮಣ ರೆಡ್ಡಿ ಮಾತನಾಡಿ, “ಕರ್ನಾಟಕ ಕೌಶಲ್ಯ ಒಲಿಂಪಿಕ್ಸ್ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವ ತರಬೇತಿಯನ್ನು ಅಧಿಕಾರಿಗಳು ಪಡೆಯಲಿದ್ದಾರೆ. ಜೊತೆಗೆ ಯುರೋಪ್, ಜಪಾನ್ ಮತ್ತು ಯುಎಇಯಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ವಿವರ/ಮಾಹಿತಿ/ಒಳನೋಟ ಪಡೆಯಲಿದ್ದಾರೆ” ಎಂದರು.

ಕೈಗಾರಿಕಾ ಪಾಲುದಾರಿಕೆ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳ ಬಗ್ಗೆಯೂ ರಮಣರೆಡ್ಡಿ ಗಮನ ಸೆಳೆದರು. ಆಡಳಿತ ಮಟ್ಟದಲ್ಲಿ ಉದ್ದೇಶಿತ ಸಾಮರ್ಥ್ಯ ವೃದ್ಧಿಯ ಮೂಲಕ ರಾಜ್ಯದ ಕೌಶಲ್ಯ ಅಭಿವೃದ್ಧಿ ಮೂಲ ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಉಪಕ್ರಮವು ಮಹತ್ವದ ಹೆಜ್ಜೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

6 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

10 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

11 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

11 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

11 hours ago