ರಾಜ್ಯ

ಇಡೀ ದೇಶಕ್ಕೆ ಕರ್ನಾಟಕದ ಗ್ಯಾರಂಟಿ ಮಾದರಿ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬಣ್ಣಿಸಿದರು.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಬಜೆಟ್​​ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

andolanait

Recent Posts

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 mins ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

13 mins ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

2 hours ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

3 hours ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

6 hours ago