ರಾಜ್ಯ

ಇಡೀ ದೇಶಕ್ಕೆ ಕರ್ನಾಟಕದ ಗ್ಯಾರಂಟಿ ಮಾದರಿ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬಣ್ಣಿಸಿದರು.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಬಜೆಟ್​​ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

13 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

13 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

13 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

13 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

14 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

14 hours ago