ರಾಜ್ಯ

ಇಡೀ ದೇಶಕ್ಕೆ ಕರ್ನಾಟಕದ ಗ್ಯಾರಂಟಿ ಮಾದರಿ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬಣ್ಣಿಸಿದರು.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಬಜೆಟ್​​ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

6 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

6 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

6 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

6 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

6 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

6 hours ago