ರಾಜ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು.

ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ.

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ ಎಂದರು. ಈಗಾಗಲೇ ನೇರ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ.

16 ಜಾನವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ

28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ.

344 ಕಿಮಿ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆಧ್ಯತೆ ಮೇಲೆ ಸರಿ ಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ನಾವು ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಮಾಜಿ ಸಚಿವ ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago