ರಾಜ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು.

ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ.

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ ಎಂದರು. ಈಗಾಗಲೇ ನೇರ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ.

16 ಜಾನವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ

28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ.

344 ಕಿಮಿ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆಧ್ಯತೆ ಮೇಲೆ ಸರಿ ಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ನಾವು ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಮಾಜಿ ಸಚಿವ ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

55 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago