ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ಉರುಳಿಬಿದ್ದಿದ್ದು, ಟೆಂಪೋನಲ್ಲಿದ್ದ 12 ಕಾರ್ಮಿಕರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಈ ಪೈಕಿ ಐವರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಪಶ್ಚಿಮ ಬಂಗಾಳದ ಕಮಲ್, ಸಮರೇಶ್, ಅಸ್ಸಾಂನ ಪಪ್ಪು ರವಿ ದಾಸ್, ಹರೀಶ್,ತ್ರಿಪುರಾದ ಗಪುನಾತ್ ಮೃತ ಕಾರ್ಮಿಕರು.
ಘಟನೆ ನಡೆದದ್ದು ಹೇಗೆ?
ಟೆಂಪೋವು ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ಸಾಗಿಸುತ್ತಿತ್ತು. ವಾಹನದಲ್ಲಿ ಒಟ್ಟು 12 ಮಂದಿ ಕಾರ್ಮಿಕರಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ ಭಾರವಾದ ಕಬ್ಬಿಣದ ಸಲಕರಣೆಗಳು ಕಾರ್ಮಿಕರ ಮೇಲೆ ಬಿದ್ದಿವೆ. ಈ ಪರಿಕರಗಳ ನಡುವೆ ಸಿಲುಕಿ ಉಸಿರುಗಟ್ಟಿ ಉತ್ತರ ಭಾರತದ ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…