ರಾಜ್ಯ

ದಸರಾದಲ್ಲಿ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಸಚಿವ ಚಲುವರಾಯಸ್ವಾಮಿ

ಲಕ್ನೋ: ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕು ಎಂಬ ಆಸೆ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ.ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ವಾರಣಾಸಿಯಲ್ಲಿ ಕಾವೇರಿ ಆರತಿ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ.

ಹರಿದ್ವಾರದಲ್ಲಿ ನೂರಕ್ಕೂ ಅಧಿಕ ವರ್ಷದ ಅನುಭವ ಇದೆ. ವಾರಣಾಸಿಯಲ್ಲಿ 35 ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಗಂಗಾನದಿಯಂತೆ ಕಾವೇರಿ ಕೂಡ ಅತಿ ಮುಖ್ಯವಾದ ನದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಬಂದು ಜನರು ಸಾವನ್ನಪ್ಪುತ್ತಿದ್ದ ಸಂದರ್ಭದಲ್ಲಿ ಅದು ನಿಯಂತ್ರಣಕ್ಕೆ ಬರಲಿ ಎಂದು ಆರತಿ ಶುರು ಮಾಡಿದ ಪ್ರತೀತಿ ಇದೆ.

ರಾಜ್ಯದಲ್ಲಿ ಸಕಾಲಕ್ಕೆ ಒಳ್ಳೆಯ ಮಳೆಯಾಗಲಿ. ನದಿ ಸಮಸ್ಯೆ ಇತ್ಯರ್ಥವಾಗಲಿ ಎಂದು ನಾವು ಕಾವೇರಿ ಆರತಿ ಶುರು ಮಾಡಲಿದ್ದೇವೆ ಎಂದರು.

ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆ. ಒಮ್ಮೆ ಶುರು ಮಾಡಿದ ಮೇಲೆ ನಿಲ್ಲಿಸಬಾರದು. ಯಾರೇ ಬಂದರೂ ಅದನ್ನು ಮುಂದುವರಿಸಿಕೊಂಡು ಹೋಗಲೇಬೇಕು ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago