ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.
ಈವರೆಗೆ ಕರ್ನಾಟಕದಿಂದ ತಮಿಳುನಾಡು ರಾಜ್ಯಕ್ಕೆ 71.56 ಟಿಎಂಸಿ ನೀರು ಹರಿಸಬೇಕಿತ್ತು. ರಾಜ್ಯದಲ್ಲಿ ಧಾರಾಕಾರ ಮಳೆಯಾಗಿ ಜಲಾಶಯಗಳು ಕೆಲವೇ ದಿನಗಳಲ್ಲಿ ಭರ್ತಿಯಾದವು. ಈ ಹಿನ್ನೆಲೆಯಲ್ಲಿ 170 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ. ಹೆಚ್ಚುವರಿಯಾಗಿ 100 ಟಿಎಂಸಿ ನೀರು ಹರಿದಿದೆ ಎಂದು ಕರ್ನಾಟಕ ವಾದ ಮಂಡಿಸಿತು.
ವಾದ ಆಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಎರಡೂ ರಾಜ್ಯಗಳಿಗೂ ಸಲಹೆ ನೀಡಿದೆ. ಎರಡೂ ರಾಜ್ಯಗಳು ಕಾವೇರಿ ನದಿ ನೀರನ್ನು ವಿವೇಚನೆಯಿಂದ ಬಳಸಿಕೊಳ್ಳಿ. ಜಲಾಶಯಗಳಲ್ಲಿ ಆದಷ್ಟು ಹೆಚ್ಚಿನ ಮಟ್ಟಿಗೆ ನೀರನ್ನು ಸಂಗ್ರಹಿಸಿಕೊಟ್ಟುಕೊಳ್ಳಿ. ಜಲಾಶಯಗಳು ತುಂಬಿವೆ ಎಂದು ನೀರನ್ನು ಪೋಲು ಮಾಡಬೇಡಿ. ಈ ಬಗ್ಗೆ ಜಲಾಶಯದ ಅಧಿಕಾರಿಗಳಿಗೆ ತಿಳಿಸಿ ಎಂದು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…