ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಸಮಿತಿ ಪ್ರತಿದಿನ 1ಟಿಎಂಸಿ ನೀರನ್ನು ಜುಲೈ.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ ಹಾಗೂ ನಮ್ಮ ರೈತರಿಗೆ ಅನ್ಯಾಯವಾದಂತಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ. ನಮ್ಮ ಬೆಳೆಗಳು ನಾಶವಾಗುತ್ತಿವೆ. ಎಲ್ಲಾ ಜಲಾಶಯಗಳಲ್ಲಿ ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ವಾಟಾಳ್ ನಾಗರಾಜ್ ಅವರು, ರಾಜ್ಯದ ಎಲ್ಲಾ ಸಂಸದರು ರಾಜ್ಯದ ಪರವಾಗಿ ಏನು ಮಾಡ್ತಾರೆ.? ಎಲ್ಲಾ ಸಂಸದರು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹೋಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕು. ಇದು ಗಂಭೀರವಾದ ಪರಿಸ್ಥಿತಿ ಎಂದು ಕಿಡಿಕಾರಿದರು.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…