ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿವು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ: ವಾಟಾಳ್‌ ನಾಗರಾಜ್‌ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಸಮಿತಿ ಪ್ರತಿದಿನ 1ಟಿಎಂಸಿ ನೀರನ್ನು ಜುಲೈ.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ ಹಾಗೂ ನಮ್ಮ ರೈತರಿಗೆ ಅನ್ಯಾಯವಾದಂತಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ. ನಮ್ಮ ಬೆಳೆಗಳು ನಾಶವಾಗುತ್ತಿವೆ. ಎಲ್ಲಾ ಜಲಾಶಯಗಳಲ್ಲಿ ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ವಾಟಾಳ್‌ ನಾಗರಾಜ್‌ ಅವರು, ರಾಜ್ಯದ ಎಲ್ಲಾ ಸಂಸದರು ರಾಜ್ಯದ ಪರವಾಗಿ ಏನು ಮಾಡ್ತಾರೆ.? ಎಲ್ಲಾ ಸಂಸದರು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹೋಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕು. ಇದು ಗಂಭೀರವಾದ ಪರಿಸ್ಥಿತಿ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago