ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಸಮಿತಿ ಪ್ರತಿದಿನ 1ಟಿಎಂಸಿ ನೀರನ್ನು ಜುಲೈ.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ ಹಾಗೂ ನಮ್ಮ ರೈತರಿಗೆ ಅನ್ಯಾಯವಾದಂತಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ. ನಮ್ಮ ಬೆಳೆಗಳು ನಾಶವಾಗುತ್ತಿವೆ. ಎಲ್ಲಾ ಜಲಾಶಯಗಳಲ್ಲಿ ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ವಾಟಾಳ್ ನಾಗರಾಜ್ ಅವರು, ರಾಜ್ಯದ ಎಲ್ಲಾ ಸಂಸದರು ರಾಜ್ಯದ ಪರವಾಗಿ ಏನು ಮಾಡ್ತಾರೆ.? ಎಲ್ಲಾ ಸಂಸದರು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹೋಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕು. ಇದು ಗಂಭೀರವಾದ ಪರಿಸ್ಥಿತಿ ಎಂದು ಕಿಡಿಕಾರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…