ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಸಮಿತಿ ಪ್ರತಿದಿನ 1ಟಿಎಂಸಿ ನೀರನ್ನು ಜುಲೈ.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ ಹಾಗೂ ನಮ್ಮ ರೈತರಿಗೆ ಅನ್ಯಾಯವಾದಂತಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ. ನಮ್ಮ ಬೆಳೆಗಳು ನಾಶವಾಗುತ್ತಿವೆ. ಎಲ್ಲಾ ಜಲಾಶಯಗಳಲ್ಲಿ ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ವಾಟಾಳ್ ನಾಗರಾಜ್ ಅವರು, ರಾಜ್ಯದ ಎಲ್ಲಾ ಸಂಸದರು ರಾಜ್ಯದ ಪರವಾಗಿ ಏನು ಮಾಡ್ತಾರೆ.? ಎಲ್ಲಾ ಸಂಸದರು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹೋಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕು. ಇದು ಗಂಭೀರವಾದ ಪರಿಸ್ಥಿತಿ ಎಂದು ಕಿಡಿಕಾರಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…