ಬೆಂಗಳೂರು: ಈ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳು ಖಾಸಗಿಯವರಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತಮ ಗುಣಮಟ್ಟದ ಸೇವೆ ನೀಡುತ್ತಿದ್ದು, ಕೌಶಲ್ಯ ತರಬೇತಿಯಿಂದ ಕ್ಷೇತ್ರದ ಜನರು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯುವಲ್ಲಿ ಸಫಲರಾಗುತ್ತಿದ್ದಾರೆ.
ಹೌದು, ಇದು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಚಿತ್ರಣ. ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಕ್ಷೇತ್ರದ ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜನತೆಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಲಭ್ಯವಾಗುವಂತೆ ನೋಡಿಕೊಂಡಿದ್ದಾರೆ. ಅಲ್ಲದೆ, ಕೌಶಲ ಕೇಂದ್ರಗಳನ್ನು ಸ್ಥಾಪಿಸಿ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದ್ದಾರೆ.
ಸರ್ವಜ್ಞ ಹೆಲ್ತ್ ಕೇರ್ ಇನ್ ಸ್ಟಿಟ್ಯೂಟ್, ಸರ್ವಜ್ಞ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳ ಉನ್ನತೀಕರಣ, ಸಮುದಾಯ ಸೇವೆಗಳ ನವೀಕರಣ (ಧಾರ್ಮಿಕ ಕೇಂದ್ರಗಳು)ದ ಜತೆಗೆ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಆರಂಭಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ.
ಸರ್ವಜ್ಞ ಹೆಲ್ತ್ ಕೇರ್ ಇನ್ ಸ್ಟಿಟ್ಯೂಟ್ ನಲ್ಲಿ ಡಯಾಲಿಸಿಸ್ ಕೇಂದ್ರಗಳು, ಮೆಡಿಕಲ್ ಸೆಂಟರ್, ಹೊರರೋಗಿಗಳ ಸೇವೆ, ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸಾ ಘಟಕ, ಡ್ರೆಸ್ಸಿಂಗ್ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಮೆಡಿಕಲ್ ಸ್ಟೋರ್ ಸೇವೆಗಳು ಲಭ್ಯವಿವೆ. ಆ ಮೂಲಕ -24,500ಕ್ಕೂ ಹೆಚ್ಚು ಡಯಾಲಿಸಿಸ್ ಮಾಡಲಾಗಿದೆ. 87,680ಕ್ಕೂ ಹೆಚ್ಚು ಸಮಾಲೋಚನೆಗಳನ್ನು ಒದಗಿಸಲಾಗಿದೆ. 25,000ಕ್ಕೂ ಹೆಚ್ಚುನೋಂದಾಯಿತ ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗಿದೆ. ಸಮುದಾಯ ಕಾರ್ಯಕರ್ತರು 21,500ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಆರೋಗ್ಯ ಸೇವೆ ಒದಗಿಸಿದ್ದಾರೆ. ಔಟ್ ರೀಚ್ ಕಾರ್ಯಕ್ರಮದ ಮೂಲಕ 5,500ಕ್ಕೂ ರೋಗಿಗಳನ್ನು ಪರೀಕ್ಷಿಸಲಾಗಿದೆ.
ಅದೇ ರೀತಿ ಸರ್ವಜ್ಞ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಸಾವಿರಾರು ಮಂದಿಗೆ ಪ್ರಾಥಮಿಕ ಹಂತದ ಕಂಪ್ಯೂಟರ್ ತರಬೇತಿ, ಟೈಲರಿಂಗ್, ಕಸೂತಿ, ಕಲೆ ಮತ್ತು ಕರಕುಶಲ ತಯಾರಿಕೆ ಕೌಶಲ್ಯ, ಮೇಣದಬತ್ತಿಯ ತಯಾರಿಕೆ, ಚಾಕೊಲೇಟ್ ತಯಾರಿಕೆ, ಸಾಬೂನುಮತ್ತು ಡಿಟರ್ಜೆಂಟ್ ತಯಾರಿಕೆ, ಮೊಬೈಲ್ ದುರಸ್ತಿ, ಎಲೆಕ್ಟ್ರಿಕಲ್ ಕೆಲಸ, ಡೇಟಾ ಎಂಟ್ರಿ ಮತ್ತಿತರೆ ತರಬೇತಿಗಳನ್ನು ನೀಡಲಾಗಿದ್ದು, ಸಾಕಷ್ಟು ಮಂದಿ ಸ್ವಯಂ ಉದ್ಯೋಗ ಪಡೆದುಕೊಂಡಿದ್ದಾರೆ.
ಶಿಕ್ಷಣ ಕ್ರಾಂತಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ, ಸರ್ಕಾರಿ ಉರ್ದು ಪ್ರೌಢಶಾಲೆ, ಲಿಂಗರಾಜಪುರ ಸರ್ಕಾರಿ ಶಾಲೆ, ಸರ್ಕಾರಿ ಉರ್ದು ಮಾದರಿ ಹಿರಿಯ ಪ್ರಾಥಮಿಕ ಶಾಲೆ, ವೀರಣ್ಣ ಪಾಳ್ಯ ಶಾಲೆ ಸೇರಿದಂತೆ 28 ಸರ್ಕಾರಿ ಶಾಲೆಗಳನ್ನು ಸಿಎಸ್ ಆರ್ ನಿಧಿಯಡಿ ಉನ್ನತೀಕರಣಗೊಳಿಸಿ ಮಕ್ಕಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ಸಿಗುವಂತೆ ನೋಡಿಕೊಳ್ಳಲಾಗಿದೆ.
ಇನ್ನು ಸ್ಮಾರ್ಟ್ ಕ್ಲಾಸ್ ರೂಂ ಪರಿಕಲ್ಪನೆಯಲ್ಲಿ ಶಾಲೆಗಳನ್ನು ಡಿಜಿಟಲೀಕರಣಗೊಳಿಸುವುದು, ಹಿಂದುಳಿದ ಮಕ್ಕಳಿಗೆ ಏಕರೂಪದ ಕಲಿಕಾ ವ್ಯವಸ್ಥೆ, ಉತ್ತಮ ಶಿಕ್ಷಣಕ್ಕಾಗಿ ಅಗತ್ಯ ಸಿಬ್ಬಂದಿ ನೇಮಕ, ಕೊರೋನಾ ನಂತರದಲ್ಲಿ ಕಲಿಕಾ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಾಗಿ ತೇರ್ಗಡೆಯಾಗುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.
ಹೆಣ್ಣೂರು ಗುಂಡುತೋಪು, ವೀರಣ್ಣ ಪಾಳ್ಯ, ಕಾಮರಾಜನಗರ, ಸರ್ವೋದಯನಗರ, ಜೀವನಹಳ್ಳಿ, ಕೆ.ಜಿ.ಹಳ್ಳಿ ಸೇರಿದಂತೆ 37 ಅಂಗನವಾಡಿ ಕೇಂದ್ರಗಳನ್ನು ಖಾಸಗಿ ಶಿಶು ವಿಹಾರಗಳ ಮಾದರಿಯಲ್ಲಿ ಉನ್ನತೀಕರಿಸಿದ್ದು, ಇದರಿಂದಾಗಿ ಮಕ್ಕಳಿಗೆ ಉತ್ತಮ ಪೌಷ್ಠಿಕ ಆಹಾರ ಸಿಗುವಂತಾಗಿ ಅವರಲ್ಲಿ ಅನಾರೋಗ್ಯದಂತಹ ಸಮಸ್ಯೆಗಳು ಕಡಿಮೆಯಾಗಿವೆ. ಆರಂಭಿಕ ಶಿಕ್ಷಣದಿಂದಲೇ ಮಕ್ಕಳಿಗೆ ಸೂಕ್ತ ಸೌಲಭ್ಯ ದೊರಕುತ್ತಿದೆ.
ಕೋಟ್))
ಸರ್ವಜ್ಞನಗರ ಕ್ಷೇತ್ರದಲ್ಲಿ ಸರ್ಕಾರದಿಂದ ಸಿಗುವ ಆರೋಗ್ಯ, ಶಿಕ್ಷಣ ಸೌಲಭ್ಯಗಳ ಜತೆಗೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ತಮ್ಮ ಕೈಲಾದ ಸೇವೆ ಮಾಡುತ್ತಿದ್ದೇನೆ. ಇದರಿಂದ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಲಕ್ಷಾಂತರ ಮಂದಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೇವೆ ಲಭಿಸಿದೆ. ಸಾಕಷ್ಟು ಮಂದಿ ಸ್ವಯಂ ಉದ್ಯೋಗಿಗಳಾಗಿದ್ದಾರೆ. ಇಂತಹ ಸಾಮಾಜಿಕ ಕಾರ್ಯಗಳು ನನಗೆ ತೃಪ್ತಿ ನೀಡುತ್ತಿವೆ.
– ಕೆ.ಜೆ ಜಾರ್ಜ್, ಇಂಧನ ಸಚಿವ
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…