ರಾಜ್ಯ

ಪಿಎಸ್‌ಐ ಮರು ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆ

ಬೆಂಗಳೂರು: ಪಿಎಸ್‌ಐಗಳ ನೇಮಕಾತಿ ಪರೀಕ್ಷೆಯನ್ನು ಡಿಸೆಂಬರ್‌ ೨೩ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ೨೦೨೧ರಲ್ಲಿ ನಡೆದಿದ್ದ ೫೪೫ ಪಿಎಸ್‌ಐ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಗಳು ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಕೆಲವು ಪೋಷಕರನ್ನೂ ಸೇರಿದಂತೆ ಹಲವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿತ್ತು.

 

ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದ ಹಿನ್ನಲೆಯಲ್ಲಿ, ಅಂದಿನ ಸರ್ಕಾರ ಅಧಿಸೂಚನೆಯನ್ನು ರದ್ದುಗೊಳಿಸಿ ಮರು ಪರೀಕ್ಷೆಗೆ ಅದೇಶ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸತತ ಎರಡು ವರ್ಷಗಳ ವಿಚಾರಣೆಯ ಬಳಿಕ ಇತ್ತೀಚೆಗೆ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು.

 

ಈ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಪಿಎಸ್‌ಐಗಳ ಮರು ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳುತ್ತಿದೆ.  ಪರೀಕ್ಷೆಗೆ ೧೬ ರೀತಿಯ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗುತ್ತಿದ್ದು, ಡಿಸೆಂಬರ್‌ ೨೩ರಂದು ಬೆಂಗಳೂರಿನಲ್ಲಿ ಸಬ್‌ಇನ್‌ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯನ್ನು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಧಿಕಾರ ನಿರ್ದೇಶಕಿ ರಮ್ಯ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

4 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

9 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

12 hours ago