ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹಗರಣದ ಕಿಂಗ್ಪಿನ್ ಆಗಿರುವ ಹರ್ಷ, ರವಿಶಂಕರ್, ಶಶಿಕುಮಾರ್, ಪುನೀತ್, ಪ್ರಕಾಶ್, ಪುರುಷೋತ್ತಮ್, ಅವಿನಾಶ್ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಇಎ ಆಡಳಿತಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕೆಇಎ ನೌಕರ ಅವಿನಾಶ್ ಸೇರಿದಂತೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಕೆಇಎ ನೌಕರ ಅವಿನಾಶ್ ಸಹಾಯದಿಂದ ಲಕ್ಷಾಂತರ ರೂಪಾಯಿ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ ಡೀಲ್ ಮಾಡುತ್ತಿದ್ದರು ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸೀಟು ಬ್ಲಾಕ್ ಮಾಡಿ ಕೋಟಿ ಕೋಟಿ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಹಗರಣದಲ್ಲಿ ಪ್ರತಿಷ್ಠಿತ ಕಾಲೇಜುಗಳು ಸಹ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಲ್ಲೇಶ್ವರಂ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ.
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಹಗರಣದ ಬಗ್ಗೆ ಇನ್ನಷ್ಟು ಸ್ಫೋಟಕ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…