ರಾಜ್ಯ

ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ : ಈಶ್ವರಪ್ಪ ಲೇವಡಿ

ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಕಿಡಿ ಕಾರಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ.ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್‌ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್‌ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು.

ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪೆಇಸಿಕೊಂಡಿದೆ ಎಂದು ತಿವಿದಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ನೆನ್ನೆ (ಗುರುವಾರ) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆಯನ್ನು ಈಶ್ವರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಇನ್ನು ಜಾತಿಗಣತಿಯ ವಿಚಾರವಾಗಿ ಮಾತನಾಡಿ ಈಶ್ವರಪ್ಪ ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ 9 ವರ್ಷದ ಕೆಳಗೆ ಒಂದು ವಾರದಲ್ಲಿ ವರದಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರು. ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಬಿಡುಗಡೆ ಮಾಡಿಲ್ಲ ಎಲ್ಲಾ ಜಾತಿಗಳ ನಡುವೆ ಸಂಘರ್ಷ ತಂದಿಟ್ಟಿದ್ದಾರೆ ಎಂದರು.

lokesh

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

3 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

3 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

3 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

8 hours ago