ರಾಜ್ಯ

ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ : ಈಶ್ವರಪ್ಪ ಲೇವಡಿ

ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಕಿಡಿ ಕಾರಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ.ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್‌ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್‌ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು.

ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪೆಇಸಿಕೊಂಡಿದೆ ಎಂದು ತಿವಿದಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ನೆನ್ನೆ (ಗುರುವಾರ) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆಯನ್ನು ಈಶ್ವರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಇನ್ನು ಜಾತಿಗಣತಿಯ ವಿಚಾರವಾಗಿ ಮಾತನಾಡಿ ಈಶ್ವರಪ್ಪ ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ 9 ವರ್ಷದ ಕೆಳಗೆ ಒಂದು ವಾರದಲ್ಲಿ ವರದಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರು. ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಬಿಡುಗಡೆ ಮಾಡಿಲ್ಲ ಎಲ್ಲಾ ಜಾತಿಗಳ ನಡುವೆ ಸಂಘರ್ಷ ತಂದಿಟ್ಟಿದ್ದಾರೆ ಎಂದರು.

lokesh

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

2 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

3 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

7 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

21 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

22 hours ago