ರಾಜ್ಯ

ದೇವರು-ಧರ್ಮದ ಹೆಸರಲ್ಲಿ ದೇಶ-ರಾಜ್ಯ ಒಡೆಯುವ ಬಿಜೆಪಿಯನ್ನು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ

ಸವದತ್ತಿ: ದೇವರು-ಧರ್ಮದ ಹೆಸರಲ್ಲಿ ದೇಶ ಹಾಗೂ ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

5 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

12 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

12 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

12 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

12 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

15 hours ago