ರಾಜ್ಯ

ಕೆಂಪೇಗೌಡ ಬಡಾವಣೆ ಕಾಮಗಾರಿ: ಶಾಸಕ ಎಸ್‌ಟಿ ಸೋಮಶೇಖರ್‌ ಶ್ಲಾಘನೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯ ಬಗ್ಗೆ ಪರಿಶೀಲಿಸಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ.

ವಿಧಾನಸೌದದಲ್ಲಿ ಫೆ.6 ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 , 6, 7ರಲ್ಲಿ ಆಂತರಿಕ ರಸ್ತೆಗಳ ಡಾಂಬರೀಕರಣ ಬಹುತೇಕ ಪೂರ್ಣಗೊಂಡಿದೆ. ನಿವೇಶನದಾರರು ಮನೆ ನಿರ್ಮಾಣ ಮಾಡಲು ಮುಂದಾಗುತ್ತಿಲ್ಲಾ ಆದರೂ ಪ್ರಾಧಿಕಾರದ ಉಳಿದ ಬ್ಲಾಕ್‌ಗಳಲ್ಲಿ ಸುಮಾರು ಅಂದಾಜು ಮೊತ್ತ ರೂ 200. ಕೋಟಿಗೆ ಬಡಾವಣೆಯ ಆಂತರಿಕ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಮುಂದಾಗಿದೆ ಎಂದು ಶ್ಲಾಘಿಸಿದ್ದಾರೆ.

ಕೆಂಪೇಗೌಡ ಬಡಾವಣೆಯು ನನ್ನ ಮತ ಕ್ಷೇತ್ರದಲ್ಲಿರುವ ಬಡಾವಣೆಯಾಗಿದ್ದು ಯಾವುದೇ ಕುಂದುಕೊರತೆಗಳಿದ್ದರೇ ಇಲಾಖೆಯವರಿಂದ ಪರಿಹರಿಸುವುದಾಗಿ ತಿಳಿಸಿದರು.

ಪ್ರಾಧಿಕಾರದವರು ಸಮಿತಿಯ ಸಭೆಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆಗಿರುವ ಪ್ರಗತಿಯ ವಿವರವನ್ನು ಮುಂದಿನ ಸಭೆಗೆ ಸಲ್ಲಿಸಿ, ಈ ಅರ್ಜಿಯನ್ನು ಅಂತಿಮಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರಲ್ಲಿ ಕೋರಿದರು.

ಒಟ್ಟಾರೆಯಾಗಿ ಬಡಾವಣೆಯ ಕೆಲಸ ಹಾಗೂ ಎಂ.ಎ.ಆರ್ ರಸ್ತೆಯ ಕೆಲಸದಲ್ಲಿ ಪ್ರಗತಿಯಾಗಿದೆಯೆಂದು ತಿಳಿಸಿದರು. ಈ ಮಧ್ಯೆ ಶಾಸಕರಾದ ಸುರೇಶ್ ಕುಮಾರ್ ರವರು ಮಾತನಾಡುತ್ತಾ, ಸದರಿ ಬಡಾವಣೆಯಲ್ಲಿ ರಸ್ತೆ ಅಗೆಯದಂತೆ, ಕುಡಿಯುವ ನೀರಿನ ಸಂಪರ್ಕಕ್ಕಾಗಿ ಪ್ರಾಧಿಕಾರವು ನಿವೇಶನದಾರರಿಂದ ಪಡೆಯುತ್ತಿರುವ ಮೊತ್ತ ಅಧಿಕವಾಗಿದ್ದು, ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಶಾಸಕರಾದ ಯು.ಬಿ. ಬಣಕಾರ್, ಸಿ.ಎನ್.ಬಾಲಕೃಷ್ಣ, ಮಂಥರ್ ಗೌಡ, ಡಾ.ಅವಿನಾಶ್‌ ಜಾಧವ್, ಎಚ್.ಡಿ.ತಮ್ಮಯ್ಯ ಹಾಗೂ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

60 mins ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

1 hour ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago