ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯ ಬಗ್ಗೆ ಪರಿಶೀಲಿಸಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ.
ವಿಧಾನಸೌದದಲ್ಲಿ ಫೆ.6 ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 , 6, 7ರಲ್ಲಿ ಆಂತರಿಕ ರಸ್ತೆಗಳ ಡಾಂಬರೀಕರಣ ಬಹುತೇಕ ಪೂರ್ಣಗೊಂಡಿದೆ. ನಿವೇಶನದಾರರು ಮನೆ ನಿರ್ಮಾಣ ಮಾಡಲು ಮುಂದಾಗುತ್ತಿಲ್ಲಾ ಆದರೂ ಪ್ರಾಧಿಕಾರದ ಉಳಿದ ಬ್ಲಾಕ್ಗಳಲ್ಲಿ ಸುಮಾರು ಅಂದಾಜು ಮೊತ್ತ ರೂ 200. ಕೋಟಿಗೆ ಬಡಾವಣೆಯ ಆಂತರಿಕ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಮುಂದಾಗಿದೆ ಎಂದು ಶ್ಲಾಘಿಸಿದ್ದಾರೆ.
ಕೆಂಪೇಗೌಡ ಬಡಾವಣೆಯು ನನ್ನ ಮತ ಕ್ಷೇತ್ರದಲ್ಲಿರುವ ಬಡಾವಣೆಯಾಗಿದ್ದು ಯಾವುದೇ ಕುಂದುಕೊರತೆಗಳಿದ್ದರೇ ಇಲಾಖೆಯವರಿಂದ ಪರಿಹರಿಸುವುದಾಗಿ ತಿಳಿಸಿದರು.
ಪ್ರಾಧಿಕಾರದವರು ಸಮಿತಿಯ ಸಭೆಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆಗಿರುವ ಪ್ರಗತಿಯ ವಿವರವನ್ನು ಮುಂದಿನ ಸಭೆಗೆ ಸಲ್ಲಿಸಿ, ಈ ಅರ್ಜಿಯನ್ನು ಅಂತಿಮಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರಲ್ಲಿ ಕೋರಿದರು.
ಒಟ್ಟಾರೆಯಾಗಿ ಬಡಾವಣೆಯ ಕೆಲಸ ಹಾಗೂ ಎಂ.ಎ.ಆರ್ ರಸ್ತೆಯ ಕೆಲಸದಲ್ಲಿ ಪ್ರಗತಿಯಾಗಿದೆಯೆಂದು ತಿಳಿಸಿದರು. ಈ ಮಧ್ಯೆ ಶಾಸಕರಾದ ಸುರೇಶ್ ಕುಮಾರ್ ರವರು ಮಾತನಾಡುತ್ತಾ, ಸದರಿ ಬಡಾವಣೆಯಲ್ಲಿ ರಸ್ತೆ ಅಗೆಯದಂತೆ, ಕುಡಿಯುವ ನೀರಿನ ಸಂಪರ್ಕಕ್ಕಾಗಿ ಪ್ರಾಧಿಕಾರವು ನಿವೇಶನದಾರರಿಂದ ಪಡೆಯುತ್ತಿರುವ ಮೊತ್ತ ಅಧಿಕವಾಗಿದ್ದು, ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಶಾಸಕರಾದ ಯು.ಬಿ. ಬಣಕಾರ್, ಸಿ.ಎನ್.ಬಾಲಕೃಷ್ಣ, ಮಂಥರ್ ಗೌಡ, ಡಾ.ಅವಿನಾಶ್ ಜಾಧವ್, ಎಚ್.ಡಿ.ತಮ್ಮಯ್ಯ ಹಾಗೂ ಇತರರು ಇದ್ದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…