ರಾಜ್ಯ

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ
ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

8 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

8 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

10 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

10 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

11 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

11 hours ago