ರಾಜ್ಯ

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ
ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago