ರಾಜ್ಯ

ಕಲಾವಿದೆಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಕೇರಳ ಸರ್ಕಾರದ ವಿರುದ್ಧ ಜೆ.ಪಿ.ನಡ್ಡಾ ವಾಗ್ದಾಳಿ

ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ.

ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. ಹೀಗಾಗಿ ಕೇರಳ ಸರ್ಕಾರ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.

ಈ ಬಗ್ಗೆ ಪಾಲಕ್ಕಾಡ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು, ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡಿದ್ದು, ಕೇರಳ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಕಮ್ಯುನಿಸ್ಟ್‌ ಪಕ್ಷದವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಳ ಸ್ಪಷ್ಟವಾಗಿ ಹೇಳಿದೆ. ಇದನ್ನು ಹೇಳಲು ನಮಗೆ ತೀವ್ರ ಬೇಸರವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಈ ಬಗ್ಗೆ ಮೌನ ವಹಿಸಬಾರದು. ತಕ್ಷಣವೇ ಈ ಬಗ್ಗೆ ಎಲ್ಲರಿಗೂ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…

26 mins ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

58 mins ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

1 hour ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

1 hour ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

2 hours ago

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…

2 hours ago