ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ.
ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. ಹೀಗಾಗಿ ಕೇರಳ ಸರ್ಕಾರ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದರು.
ಈ ಬಗ್ಗೆ ಪಾಲಕ್ಕಾಡ್ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು, ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡಿದ್ದು, ಕೇರಳ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಕಮ್ಯುನಿಸ್ಟ್ ಪಕ್ಷದವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಹಳ ಸ್ಪಷ್ಟವಾಗಿ ಹೇಳಿದೆ. ಇದನ್ನು ಹೇಳಲು ನಮಗೆ ತೀವ್ರ ಬೇಸರವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮೌನ ವಹಿಸಬಾರದು. ತಕ್ಷಣವೇ ಈ ಬಗ್ಗೆ ಎಲ್ಲರಿಗೂ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…