ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್ ಮಾಹಿತಿ ನೀಡಿದ್ದು, 27 ಬಾವಲಿಗಳ ಮಾದರಿಗಳಲ್ಲಿ ಆರರಲ್ಲಿ ನಿಫಾ ವೈರಸ್ ಪತ್ತೆಯಾಗಿದೆ.
ಮಲಪ್ಪುರಂ ಜಿಲ್ಲೆಯ ಪಂಡಿಕ್ಕಾಡ್ನಲ್ಲಿ ಜುಲೈ ತಿಂಗಳಲ್ಲಿ ನಿಫಾ ಸೋಂಕಿನಿಂದ 14 ವರ್ಷದ ಬಾಲಕ ಸಾವನ್ನಪ್ಪಿದ್ದನು. ಈಗ ಬಾವಲಿಗಳ ಮಾದರಿಯಲ್ಲಿ ನಿಫಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ.
ನಿಫಾ ವೈರಸ್ ಒಂದು ಝೋನೋಟಿಕ್ ವೈರಸ್ ಆಗಿದ್ದು, ಇದು ಸೋಂಕಿತ ಪ್ರಾಣಿಗಳು ಅಥವಾ ಕಲುಷಿತ ಆಹಾರದ ಮೂಲಕ ಮನುಷ್ಯರಿಗೆ ಹರಡುತ್ತದೆ. ಇದು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕದ ಮೂಲಕ ನೇರವಾಗಿ ಹರಡುತ್ತದೆ.
ಇನ್ನು ನಾಯಿಗಳು, ಬೆಕ್ಕು, ಕುದುರೆ, ಕುರಿ ಸೇರಿದಂತೆ ಹಲವಾರು ಜಾತಿಯ ಸಾಕುಪ್ರಾಣಿಗಳಲ್ಲಿ ವೈರಸ್ ಕಂಡುಬಂದಿದೆ. ಪ್ರಾಣಿಗಳಿಂದ ಮನುಷ್ಯರಿಗೆ ಪ್ರಸರಣವು ಪ್ರಾಥಮಿಕವಾಗಿ ಕಲುಷಿತ ಆಹಾರ ಸೇವನೆಯ ಮೂಲಕ ಸಂಭವಿಸುತ್ತದೆ. ಬಾವಲಿಗಳು ನಿಫಾ ವೈರಸ್ಗೆ ನೈಸರ್ಗಿಕ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತವೆ.
ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಜನತೆಗೆ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಿಫಾ ವೈರಸ್ ಸೋಂಕು ಜಾಸ್ತಿ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…