ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಆಗ್ರಹ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ ಭಂಡ ಕಾಂಗ್ರೆಸ್ ಸರ್ಕಾರ ಅದಕ್ಕೆ ಏಕೆ ಕಿವಿಗೊಡಲಿಲ್ಲ ಎಂಬುದಕ್ಕೆ ಸದ್ಯ ಕೆಎಎಸ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳೇ ಸಾಕ್ಷಿ.
ಸಂಧಿ-ಸಮಾಸದ ಬಗ್ಗೆ ಭಾಷಣ ಮಾಡುವ, ಕನ್ನಡರಾಮಯ್ಯ ಎಂದು ವಂದಿಮಾಗಧರಿಂದ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯನವರೆ, ಪ್ರಶ್ನೆ ಪತ್ರಿಕೆಯ 70 ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳು ತಪ್ಪಿನಿಂದಲೇ ತುಂಬಿದ್ದವು. ಸಹಸ್ರಾರು ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವ ಬದಲು, ಕೂಡಲೇ ಕೆಎಎಸ್ ಮರು ಪರೀಕ್ಷೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…