ಬೀದರ್: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಆರ್ಎಸ್ಎಸ್ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಬೀದರ್ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಕ್ಫ್ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.
ಯತ್ನಾಳ್ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯತ್ನಾಳ್ ಜೋಕರ್ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…