ರಾಜ್ಯ

ಬಸವಣ್ಣನವರ ಬಗ್ಗೆ ಯತ್ನಾಳ್‌ ಲಘು ಹೇಳಿಕೆ: ಖಂಡ್ರೆ ಖಂಡನೆ

ಬೀದರ್‌: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್‌ ಅವರು ಆರ್‌ಎಸ್‌ಎಸ್‌ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್‌ ಖಂಡ್ರೆ ಕಿಡಿಕಾರಿದ್ದಾರೆ.

ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ವಕ್ಫ್‌ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.

ಯತ್ನಾಳ್‌ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್‌ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಯತ್ನಾಳ್‌ ಜೋಕರ್‌ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್‌ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago