ರಾಜ್ಯ

ಬಸವಣ್ಣನವರ ಬಗ್ಗೆ ಯತ್ನಾಳ್‌ ಲಘು ಹೇಳಿಕೆ: ಖಂಡ್ರೆ ಖಂಡನೆ

ಬೀದರ್‌: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್‌ ಅವರು ಆರ್‌ಎಸ್‌ಎಸ್‌ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್‌ ಖಂಡ್ರೆ ಕಿಡಿಕಾರಿದ್ದಾರೆ.

ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ವಕ್ಫ್‌ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.

ಯತ್ನಾಳ್‌ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್‌ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಯತ್ನಾಳ್‌ ಜೋಕರ್‌ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್‌ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

28 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago